ಚೆನ್ನೈ ತಂಡದಲ್ಲಿ ಧೋನಿ, ರೈನಾ, ಜಡೇಜ ಸ್ಥಾನ ಭದ್ರ

Update: 2017-12-22 18:36 GMT

ಚೆನ್ನೈ, ಡಿ.22: ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬರುವ 11ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎಂಎಸ್ ಧೋನಿ, ಸುರೇಶ್ ರೈನಾ ಹಾಗೂ ರವೀಂದ್ರ ಜಡೇಜರನ್ನು ತನ್ನಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

  ಹಿರಿಯ ಆಫ್-ಸ್ಪಿನ್ನರ್ ಆರ್.ಅಶ್ವಿನ್ ರೈಟ್-ಟು-ಮ್ಯಾಚ್ ಕಾರ್ಡ್ ಮೂಲಕ ಚೆನ್ನೈ ಪಾಳಯ ಸೇರುವುದು ಅನುಮಾನ. ‘‘ನಾವು ಇನ್ನಷ್ಟೇ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ಸಲ್ಲಿಸಬೇಕಾಗಿದೆ. ಧೋನಿ, ರೈನಾರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗುವುದು. ಮೂರನೇ ಆಟಗಾರ ರವೀಂದ್ರ ಜಡೇಜರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ’’ ಎಂದು ಐಪಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News