×
Ad

ಮಾಜಿ ಶಾಸಕ ಪರಣ್ಣ ಮುನವಳ್ಳಿ ಕಾರು ಢಿಕ್ಕಿ: ಬಾಲಕ ಮೃತ್ಯು

Update: 2017-12-23 20:12 IST

ಗಂಗಾವತಿ, ಡಿ. 23: ತಾಲೂಕಿನ ಮುಕ್ಕುಂಪಿ ಗ್ರಾಮದ ಬಳಿ ಮಾಜಿ ಶಾಸಕ ಪರಣ್ಣ ಮುನವಳ್ಳಿಯವರ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಮುಕ್ಕುಂಪ ಗ್ರಾಮದ 11 ವರ್ಷದ ಬಾಲಕ ಬಸವರಾಜ ಯಲ್ಲಪ್ಪ ಗೊಲ್ಲರ್ ಮೃತಪಟ್ಟ ಬಾಲಕ. ಮುಕ್ಕುಂಪ ಬಳಿ ರಸ್ತೆ ದಾಟುತಿರುವಾಗ ಇಂದರಗಿ ತಾಂಡಾಕ್ಕೆ ತೆರಳುತ್ತಿದ್ದ ಮಾಜಿ ಶಾಸಕ ಪರಣ್ಣ ಮುನವಳ್ಳಿ ಕಾರು ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಮೃತಪಟ್ಟಿದ್ದಾನೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಅನ್ಸಾರಿ ಸಾಂತ್ವನ: ನಗರದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದ ಶಸಕ ಇಕ್ಬಾಲ್ ಅನ್ಸಾರಿ ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶವ ಪರೀಕ್ಷೆ ತ್ವರಿತಗತಿಯಲ್ಲಿ ಮುಗಿಸಿ ಪಾಲಕರಿಗೆ ಒಪ್ಪಿಸುವಂತೆ ವೈದ್ಯರಿಗೆ ತಿಳಿಸಿದರು. ಬಾಲಕ ಬಸವರಾಜನ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲು ಪ್ರಯತ್ನಿಸುತ್ತಿದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News