ಮುಲ್ಕಿ: ಉದ್ಯಮಿಯ ಮನೆ, ಕಾರಿಗೆ ಗುಂಡು ಹಾರಾಟ

Update: 2017-12-23 18:00 GMT

ಮುಲ್ಕಿ, ಡಿ. 23: ಇಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಉದ್ಯಮಿಯೊಬ್ಬರ ಮನೆಗೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಾಟ ನಡೆಸಿದ ಘಟನೆ ಇಂದು ರಾತ್ರಿ 9 ಗಂಟೆಯ ಸುಮಾರಿಗೆ ನಡೆದಿದೆ.

ಮುಲ್ಕಿ ಬಸ್ ನಿಲ್ದಾಣದ ಬಳಿಯ ನಿವಾಸಿ ಉದ್ಯಮಿ ನಾಗರಾಜ್ ಎಂಬವರ ಮನೆ ಹಾಗೂ ಕಾರಿಗೆ ಗುಂಡು ತಗುಲಿದೆ ಎಂದು ತಿಳಿದುಬಂದಿದೆ.

ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 3 ಸುತ್ತು ಗುಂಡು ಹಾರಾಟ ನಡೆಸಿದ್ದಾರೆ. ಒಂದು ಗುಂಡು ನಾಗರಾಜ್‌ರ ಕಾರಿಗೆ ತಗಲಿದ್ದರೆ, ಇನ್ನೆರಡು ಮನೆಯ ಬಾಗಿಲಿಗೆ ತಗುಲಿವೆ.

ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ಅಪರಾಧ ವಿಭಾಗದ ಡಿಸಿಪಿ ಉಮಾಪ್ರಶಾಂತ್ ಮತ್ತಿತರರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News