ದೇಶದಲ್ಲಿ ಕಾಂಗ್ರೆಸ್ ಗೇ ನೀರಿಲ್ಲ, ಇನ್ನವರು ರಾಜ್ಯದ ಜನತೆಗೆ ನೀರು ನೀಡುವುದು ಎಲ್ಲಿಂದ?

Update: 2017-12-24 13:04 GMT

ಹಾವೇರಿ, ಡಿ. 24: ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೀರೇ ಇಲ್ಲದಂತಾಗಿದೆ. ಇನ್ನೂ ಕಾಂಗ್ರೆಸ್ ಪಕ್ಷದವರು ಕರ್ನಾಟಕ ರಾಜ್ಯದ ಜನರಿಗೆ ನೀರನ್ನು ಎಲ್ಲಿಂದ ತಂದು ಕೊಡುತ್ತಾರೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟೀಕಿಸಿದರು.

ರವಿವಾರ ಬಿಜೆಪಿ ಪರಿವರ್ತನಾ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೆ ಬರಬೇಕಾದರೆ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಕೇಂದ್ರ ಸರಕಾರದ ಕೆಲಸಗಳ ಆಧಾರದಲ್ಲಿ ಕರ್ನಾಟಕದಲ್ಲಿ ನಾವು ಮತ ಕೇಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಗಳನ್ನು ತಮ್ಮ ಅನುದಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಂಬಿಸಿಕೊಳ್ಳುತ್ತಿದ್ದಾರೆ. ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಹಾಜರಾಗದೆ ದೇಶದಲ್ಲಿ ಕರ್ನಾಟಕ ರಾಜ್ಯದ ಹೆಸರನ್ನು ಕೆಡಿಸುತ್ತಿದ್ದಾರೆಂದ ಆರೋಪಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಅತ್ಯಾಚಾರ, ಮರಳು ಮಾಫಿಯಾ, ಮಿತಿ ಮೀರಿದೆ ಎಂದು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News