ಮಂಗಳೂರು: ಪಿಎಫ್ಐ ಮ್ಯಾರಥಾನ್
ಮಂಗಳೂರು, ಡಿ.24: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಸಮಿತಿ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ‘ಜನಾರೋಗ್ಯವೇ ರಾಷ್ಟ್ರ ಶಕ್ತಿ’ ಎಂಬ ಕಾರ್ಯಕ್ರಮವು ನಗರದ ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದಿಂದ ಮ್ಯಾರಥಾನ್ ಓಟದೊಂದಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಭಾ ಕಾರ್ಯಕ್ರಮ ಮತ್ತು ಯೋಗ ಪ್ರಾತ್ಯಕ್ಷಿತೆ ರವಿವಾರ ನಡೆಯಿತು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಝಾಕ್ ಕೆಮ್ಮಾರ ಅವರು ಜಿಲ್ಲಾಧ್ಯಕ್ಷ ನವಾಝ್ ಉಳ್ಳಾಲರವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಅಸ್ಪತ್ರೆಯ ಪ್ರೊ. ಡಾ. ರಘುವೇಂದ್ರ, ಜಿಲ್ಲಾ ಕಾರ್ಯದರ್ಶಿ ಎ.ಕೆ. ಅಶ್ರಫ್ ಜನಾರೋಗ್ಯದ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಕಾದರ್ ಕುಳಾಯಿ, ಬಂಟ್ವಾಳ ವಲಯ ಕಾರ್ಯದರ್ಶಿ ಸಲೀಮ್ ಕುಂಪನಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯೋಗ ಪ್ರಾತ್ಯಕ್ಷಿತೆಯನ್ನು ರಫೀಕ್ ಮಂಗಳೂರು ಮತ್ತು ಬಳಗದವರು ನಡೆಸಿದರು.
ಜಿಲ್ಲಾ ಕಾರ್ಯದರ್ಶಿ ಸಿರಾಜ್ ಕಾವೂರು ಸ್ವಾಗತಿಸಿದರು. ಅಬೂಬಕರ್ ಪುತ್ತ ಕಾರ್ಯಕ್ರಮ ನಿರೂಪಿಸಿದರು.