ಕಾರು-ಬೈಕ್ ಢಿಕ್ಕಿ: ವ್ಯಕ್ತಿ ಮೃತ್ಯು

Update: 2017-12-24 17:51 GMT

ಸಾಗರ, ಡಿ.24: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರ ಉಳ್ಳೂರು ಬಳಿ ಸ್ವಿಫ್ಟ್ ಕಾರು ಹಾಗೂ ಟಿವಿಎಸ್ ಎಕ್ಸೆಲ್ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ರವಿವಾರ ನಡೆದಿದೆ. ಉಳ್ಳೂರು ವಾಸಿ ಸುಬ್ರಹ್ಮಣ್ಯ ಭಟ್ (29) ಎಂಬವರು ಟಿವಿಎಸ್ ಎಕ್ಸೆಲ್ ಬೈಕ್‌ನಲ್ಲಿ ಸಾಗರಕ್ಕೆ ಬರುತ್ತಿದ್ದಾಗ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಸುಬ್ರಹ್ಮಣ್ಯ ಭಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News