ಹುಬ್ಬಳ್ಳಿ: ಅನುದಾನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಧರಣಿ

Update: 2017-12-24 18:09 GMT

ಹುಬ್ಬಳ್ಳಿ, ಡಿ. 24: ಹುಬ್ಬಳ್ಳಿ-ಧಾರವಾಡ ಮಹಾ ನಗರಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರವಿವಾರ ಇಲ್ಲಿನ ತಹಶೀಲ್ದಾರರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಇದೇ ವೇಳೆ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯ ಸರಕಾರ ಹುಬ್ಬಳ್ಳಿ-ಧಾರವಾಡ ಮಹಾ ನಗರ ಪಾಲಿಕೆಗೆ ಅಗತ್ಯ ಅನುದಾನ ನೀಡುತ್ತಿಲ್ಲ ಎಂದು ದೂರಿದರು.

 ಸಿಎಂ ಸಿದ್ದರಾಮಯ್ಯ ಸರಕಾರ ಸಾಧನಾ ಸಮಾವೇಶದ ನೆಪದಲ್ಲಿ ಕಾಂಗ್ರೆಸ್ ಸಮಾವೇಶಗಳನ್ನು ರಾಜ್ಯದಲ್ಲಿ ನಡೆಸುತ್ತಿದ್ದು,ಜನರ ತೆರಿಗೆ ಹಣವನ್ನು ಪಕ್ಷದ ಪ್ರಚಾರಕ್ಕೆ ಪೋಲು ಮಾಡಲಾಗುತ್ತಿದೆ ಎಂದು ದೂರಿದ ಅವರು, ಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೃತ್ತ ನೌಕರರಿಗೆ ಬರಬೇಕಾದ ಪಿಂಚಣಿ 139ಕೋಟಿ ರೂ. ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News