ಟೆಂಪೋ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2017-12-25 16:13 GMT

ಮಂಡ್ಯ, ಡಿ. 25: ಟೆಂಪೋ ಟ್ರಾವಲರ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮೊಗರಹಳ್ಳಿ ಗ್ರಾಮದ ಬಳಿ ನಡೆದಿದೆ.  ಮೊಗರಹಳ್ಳಿ ಮಂಟಿ ಗ್ರಾಮದ ಮಹೇಂದ್ರ ಅವರ ಪುತ್ರ ರಾಕೇಶ್(21) ಮೃತಪಟ್ಟ ಯುವಕ.

ಮೈಸೂರು ಕಡೆಯಿಂದ ಕೆಆರ್‍ಎಸ್ ಬೃಂದಾವನಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವಲರ್ ವಾಹನ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೆಆರ್‍ಎಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News