ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷರಿಗೆ ಸನ್ಮಾನ

Update: 2017-12-26 10:38 GMT

ಮಂಗಳೂರು, ಡಿ.26: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಮುಹಮ್ಮದ್ ಕರಂಬಾರ್ ಅವರನ್ನು ಮಂಗಳವಾರ ಪುರಭವನದಲ್ಲಿ ನಡೆದ ಬ್ಯಾರಿ ಸಾಂಸ್ಕೃತಿಕ ಸಮಾರಂಭದಲ್ಲಿ ಮಂಗಳೂರು ಎಂ. ಫ್ರೆಂಡ್ಸ್ ಸಂಸ್ಥೆ ಹಾಗೂ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್, ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಯು.ಕೆ.ಮೋನು ಕಣಚೂರು, ಸಮಿತಿಯ ಸದಸ್ಯ ಹಾಗೂ ಎಂ. ಫ್ರೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ, ಎಂ.ಫ್ರೆಂಡ್ಸ್ ಸದಸ್ಯರು ಹಾಗೂ ಬ್ಯಾರಿ ಅಕಾಡಮಿಯ ಸದಸ್ಯರಾದ ಆರಿಫ್ ಪಡುಬಿದ್ರಿ, ಅನ್ಸಾರ್ ಬೆಳ್ಳಾರೆ, ಹಮೀದ್ ಗೋಳ್ತಮಜಲು, ಆರಿಫ್ ಬೆಳ್ಳಾರೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News