ಬೈಕಂಪಾಡಿ: ಹೆದ್ದಾರಿ ದುರಸ್ತಿಗೆ ಒತ್ತಾಯಿಸಿ ಅಣಕು ಶವ ಯಾತ್ರೆ

Update: 2017-12-27 09:51 GMT

ಮಂಗಳೂರು, ಡಿ. 27: ಸುರತ್ಕಲ್ ಹೆದ್ದಾರಿ ದುರಸ್ತಿ ಮಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಣಕು ಶವ ಯಾತ್ರೆಯನ್ನು ಬೈಕಂಪಾಡಿ ಬಳಿ ಬುಧವಾರ ನಡೆಸಲಾಯಿತು.

ಬೈಕಂಪಾಡಿ ಎಪಿಎಂಸಿ ಮಾರುಕಟ್ಟೆಯ ಬಳಿಯಿಂದ ದೀಪಕ್ ಪಂಪ್ ವರಗೆ ಶವಯಾತ್ರೆ ನಡೆಯಿತು. ಅಲ್ಲಿನ ಬೃಹತ್ ಹೆದ್ದಾರಿ ಗುಂಡಿಯಲ್ಲಿ ಅಣಕು ಶವವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟು, ರಸ್ತೆ ತಡೆ ನಡೆಸಲಾಯಿತು. ನಂತರ ಅದೇ ಹೆದ್ದಾರಿ ಗುಂಡಿಯಲ್ಲಿ ಶವ ದಹನ ನಡೆಸಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಈ ಸಂದರ್ಭ ಡಿವೈಎಫ್ಐ ರಾಜ್ಯಾಧ್ಯಾಕ್ಷ ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಝ್, ದಯಾನಂದ ಶೆಟ್ಟಿ, ಶ್ರೀನಾಥ್ ಕುಲಾಲ್, ಅಬೂಬಕರ್ ಬಾವಾ, ಶ್ರೀನಿವಾಸ ಹೊಸಬೆಟ್ಟು, ಮಕ್ಸೂದ್, ಅಜ್ಮಲ್ ಅಹ್ಮದ್, ನೌಷದ್ ಬಾವಾ ಮತ್ತಿತರರು ಹಾಜರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News