ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಜೆ.ಆರ್.ಲಕ್ಷ್ಮಣರಾವ್ ನಿಧನ

Update: 2017-12-29 06:29 GMT

ಮೈಸೂರು, ಡಿ.29:  ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಜೆ.ಆರ್. ಲಕ್ಷ್ಮಣರಾವ್ (97) ಶುಕ್ರವಾರ ಬೆಳಗ್ಗೆ ನಿಧನರಾದರು.

ಲಕ್ಷ್ಮಣರಾವ್ ಅವರು ಮೈಸೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಪ್ರಾಧ್ಯಾಪಕರಾಗಿ  ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ವಿಜ್ಞಾನ ಲೇಖಕರಾಗಿದ್ದ ಲಕ್ಷ್ಮಣರಾವ್ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿ  30ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು. 2016ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ  ನೀಡಿ ಗೌರವಿಸಲಾಗಿತ್ತು.

ದಾವಣಗೆರೆ ಜಿಲ್ಲೆಯ ಜಗಳೂರಿನ ಲಕ್ಷಣರಾವ್‌ ಅವರು  ತುಮಕೂರಿನ ಇಂಟರ್ ಮೀಡಿಯೆಟ್‌ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿ ಬಳಿಕ ಬೆಂಗಳೂರಿನ ಸೆಂಟ್ರಲ್‌ ಕಾಲೇಜು, ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಮೈಸೂರಿನ ಮಹಾರಾಜ ಕಾಲೇಜು, ಯುವರಾಜ ಕಾಲೇಜುಗಳಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ ಮತ್ತು ವಿಶ್ವವಿದ್ಯಾಲಯದ ಪ್ರಸಾರಾಂಗದಿಂದ ಹೊರತರಲಾದ ಇಂಗ್ಲಿಷ್‌ ಕನ್ನಡ ನಿಘಂಟಿನ ಪ್ರಧಾನ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ಪುಸ್ತಕ ‘ಆಹಾರ’ (1944). ‘ಪರಮಾಣು ಚರಿತ್ರೆ’, ‘ಗೆಲಿಲಿಯೋ’, ‘ವಿಜ್ಞಾನವಿಚಾರ’, ‘ಲೂಯಿಪಾಸ್ತರ್’, ‘ವಿಜ್ಞಾನಿಗಳೊಡನೆ ರಸನಿಮಿಷಗಳು’ ಅವರ ಪ್ರಮುಖ ಕೃತಿಗಳು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News