ಗದಗ :ವಿಶ್ವ ಕವಿ ಕುವೆಂಪು ದಿನಾಚರಣೆ
Update: 2017-12-29 12:38 GMT
ಗದಗ, ಡಿ.29 : ಗದಗ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿಂದು ವಿಶ್ವ ಕವಿ ಕುವೆಂಪು ದಿನಾಚರಣೆ ಅಂಗವಾಗಿ ವಿಶ್ವ ಮಾನವ ದಿನಾಚರಣೆಯನ್ನು ಗದಗ ಬೆಟಗೇರಿ ನಗರ ಸಭೆ ಅಧ್ಯಕ್ಷ ಬಿ.ಬಿ.ಅಸೂಟಿ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಮನೋಜ್ ಜೈನ್, ಜಿ.ಪಂ.ಸಿಇಓ ಮಂಜುನಾಥ ಚವ್ಹಾಣ, ಡಿ.ಎಫ್.ಓ ಯಶಪಾಲ ಕ್ಷೀರಸಾಗರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು, ಸಾಹಿತ್ಯಾಭಿಮಾನಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.