ಸುರತ್ಕಲ್: ವಿದ್ಯಾರ್ಥಿಗೆ ಚೂರಿ ಇರಿತ

Update: 2017-12-31 12:33 GMT

ಮಂಗಳೂರು, ಡಿ. 31: ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವಿದ್ಯಾರ್ಥಿಯೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಸಮೀಪದ ಕುಳಾಯಿ ಬಳಿ ರವಿವಾರ ಮಧ್ಯಾಹ್ನ ನಡೆದಿದೆ.

ಕುಳಾಯಿ ವಿದ್ಯಾನಗರದ ನಿವಾಸಿ ಸಿದ್ದೀಕ್ ಎಂಬವರ ಪುತ್ರ ಸೌಹಾನ್ (18) ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಈತ ನಗರದ ಕಾಲೇಜೊಂದರ ವಿದ್ಯಾರ್ಥಿ. ಸೌಹಾನ್ ಕುಳಾಯಿಯ ಮೈಂದಗುರಿ ಎಂಬಲ್ಲಿನ ಸಂಬಂಧಿಕರ ಮನೆಗೆ ತೆರಳಿ ದ್ವಿಚಕ್ರ ವಾಹನದಲ್ಲಿ ವಿದ್ಯಾನಗರಕ್ಕೆ ಹಿಂದಿರುಗುತ್ತಿದ್ದ ಎನ್ನಲಾಗಿದ್ದು, ಈ ಸಂದರ್ಭ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಅದೇ ಮಾರ್ಗದಲ್ಲಿ ಬಂದು ಈತನ ಹೆಸರು ಕೇಳಿದ್ದಾರೆ. ಬಳಿಕ ಈತನ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.

ಕೈಗೆ ಗಾಯಗೊಂಡ ಸೌಹಾನ್‌ನ್ನು ಸುರತ್ಕಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.  ದುಷ್ಕರ್ಮಿಗಳು ಆಗಮಿಸಿದ್ದ ದ್ವಿಚಕ್ರ ವಾಹನದಲ್ಲಿ ನಂಬರ್ ಪ್ಲೇಟ್ ಇರಲಿಲ್ಲ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News