ಕಾರು ಢಿಕ್ಕಿ: ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

Update: 2017-12-31 11:18 GMT

ಕಾಸರಗೋಡು, ಡಿ. 31: ಪೊಲೀಸರ ವಾಹನ ತಪಾಸಣೆ ಸಂದರ್ಭದಲ್ಲಿ ನಿಲುಗಡೆಗೊಳಿಸಿದ್ದ ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಮೃತರನ್ನು ಅಣಂಗೂರು  ಕೊಲ್ಲಂಪಾಡಿಯ ನಿವಾಸಿ, ಎಂಬಿಎ ವಿದ್ಯಾರ್ಥಿ ಸುಹೈಲ್ (20) ಎಂದು ಗುರುತಿಸಲಾಗಿದೆ.

ಶನಿವಾರ ಘಟನೆ ನಡೆದಿತ್ತು. ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಇಂದು ಮುಂಜಾನೆ ಮೃತಪಟ್ಟರು ಎಂದು ತಿಳಿದುಬಂದಿದೆ. 

ಅಣಂಗೂರು ಮೆಹಬೂಬ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಸುಹೈಲ್ ಸಂಚರಿಸುತ್ತಿದ್ದ  ಬೈಕನ್ನು ನಿಲ್ಲಿಸಿದ್ದರು. ಬೈಕ್ ನ ದಾಖಲೆಗಳನ್ನು ತಪಾಸಣೆ ನಡೆಸುತ್ತಿದ್ದಾಗ ಹಿಂದಿನಿಂದ ಅತೀ ವೇಗದಲ್ಲಿ ಬಂದ ಕಾರು  ಢಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರ ಗಾಯಗೊಂಡ ಸುಹೈಲ್ ರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News