×
Ad

ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ

Update: 2018-01-02 22:52 IST

ಉಡುಪಿ, ಜ.2: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ 2017-18ನೇ ಸಾಲಿನಿಂದ ಉಡುಪಿ ಜಿಲ್ಲೆಯ (ನಗರಸಭೆ ಹೊರತುಪಡಿಸಿ) ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ ಒಬ್ಬರಂತೆ ಮಾಸಿಕ 3000ರೂ. ಗೌರವಧನದ ಆಧಾರದಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

10ನೇ ತರಗತಿ ಉತ್ತೀರ್ಣ/ಅನುತ್ತೀರ್ಣರಾಗಿದ್ದು ಶೇ.40ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರವನ್ನು ಹೊಂದಿರುವ ವಿಕಲಚೇತನರು ತಮ್ಮ ವಾಸಸ್ಥಳ ವ್ಯಾಪ್ತಿಯ ಪುರಸಬೆ/ಪಟ್ಟಣ ಪಂಚಾಯತ್‌ನಿಂದ ಪಡೆದ ವಾಸ್ತವ್ಯ ದೃಢೀಕರಣ ಪತ್ರ ಹಾಗೂ 3 ಪಾಸ್‌ಪೋರ್ಟ್ ಅಳತೆಯ ಬಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ ಮಣಿಪಾಲ ಇವರಿಗೆ ಜನವರಿ 25ರೊಳಗೆ ಅರ್ಜಿ ಸಲ್ಲಿಸಬಹುದು.

10ನೇ ತರಗತಿ ಉತ್ತೀರ್ಣ/ಅನುತ್ತೀರ್ಣರಾಗಿದ್ದು ಶೇ.40ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರವನ್ನು ಹೊಂದಿರುವ ವಿಕಲಚೇತನರು ತಮ್ಮ ವಾಸಸ್ಥಳ ವ್ಯಾಪ್ತಿಯ ಪುರಸಬೆ/ಪಟ್ಟಣ ಪಂಚಾಯತ್‌ನಿಂದ ಪಡೆದ ವಾಸ್ತವ್ಯ ದೃಢೀಕರಣ ಪತ್ರ ಹಾಗೂ 3 ಪಾಸ್‌ಪೋರ್ಟ್ ಅಳತೆಯ ಬಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ ಮಣಿಪಾಲ ಇವರಿಗೆ ಜನವರಿ 25ರೊಳಗೆ ಅರ್ಜಿ ಸಲ್ಲಿಸಬಹುದು. ಪುರಸಬೆ/ಪಟ್ಟಣ ಪಂಚಾಯತ್ ಮುಖ್ಯಸ್ಥರ ಆಯ್ಕೆ ಸಮಿತಿ ಮೂಲಕ ನಗರ ಪುನರ್ವಸತಿ ಕಾರ್ಯಕರ್ತರನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯನ್ನು (ದೂ:0820-2574810/811) ಅಥವಾ ಆಯಾ ತಾಲೂಕಿನ ತಾಲೂಕು ಪಂಚಾಯತ್‌ನಲ್ಲಿರುವ ಎಂಆರ್‌ಡಬ್ಲು (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News