×
Ad

ಜ.5: ತುಳು ನಾಟಕ ಪರ್ಬದ ಕುರಿತು ಸಭೆ

Update: 2018-01-02 23:13 IST

ಮಂಗಳೂರು, ಜ.2: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಮಾರ್ಚ್ ಕೊನೆಯಲ್ಲಿ ನಗರದ ಪುರಭವನದಲ್ಲಿ 8 ದಿನಗಳ ತುಳುನಾಟಕ ಪರ್ಬ (ತುಳು ನಾಟಕೋತ್ಸವ) ಆಚರಿಸಲು ಉದ್ದೇಶಿಸಲಾಗಿದೆ.

ನಾಟಕೋತ್ಸವದಲ್ಲಿ ಹಿಂದಿನ ತಲೆಮಾರಿನ ಹಿರಿಯರ ನಾಟಕ ಕೃತಿಗಳನ್ನು ರಂಗದಲ್ಲಿ ಪ್ರದರ್ಶಿಸಲು ಉದ್ದೇಶಿಸಲಾಗಿದ್ದು, ಪ್ರತಿ ದಿನ ಹಿರಿಯ ನಾಟಕಕಾರರ ಸಂಸ್ಮರಣೆ ನಡೆಸಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ರಂಗ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರ ಸಮಾಲೋಚನಾ ಸಭೆಯನ್ನು ಜ.5ರಂದು ಸಂಜೆ 3 ಗಂಟೆಗೆ ಉರ್ವಸ್ಟೋರ್‌ನಲ್ಲಿ ಅಕಾಡಮಿ ಕಚೇರಿ ತುಳುಭವನದ ಸಿರಿಚಾವಡಿಯಲ್ಲಿ ಏರ್ಪಡಿಸಲಾಗಿದೆ.

ಈ ಸಭೆಯಲ್ಲಿ ಜಿಲ್ಲೆಯ ತುಳು ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಕಲಾವಿದರು, ತಂತ್ರಜ್ಞರು, ನಿರ್ದೇಶಕರು ಭಾಗವಹಿಸಿ ಸಲಹೆ ಸೂಚನೆ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.
...

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News