ದೀಪಕ್ ಕುಟುಂಬ ಮನವೊಲಿಸಲು ಯಶಸ್ವಿಯಾದ ಜಿಲ್ಲಾಧಿಕಾರಿ ಸೆಂಥಿಲ್

Update: 2018-01-04 06:50 GMT

ಕಾಟಿಪಳ್ಳ, ಜ.4: ಬಿಜೆಪಿ ಕಾರ್ಯಕರ್ತ ದೀಪಕ್ ಅವರ ಮೃತದೇಹವನ್ನು ಸ್ವೀಕರಿಸುವ ಮೊದಲು ಗೃಹ ಸಚಿವರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದ ದೀಪಕ್ ಕುಟುಂಬ ಸದಸ್ಯರು ಹಾಗೂ ಕಾಟಿಪಳ್ಳ ಗ್ರಾಮಸ್ಥರನ್ನು ಮನವೊಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ಹಾಗೂ ಪೊಲೀಸ್ ಆಯುಕ್ತ  ಸುರೇಶ್ ಯಶಸ್ವಿಯಾಗಿದ್ದಾರೆ.

ಇದೇ ವೇಳೆ ಮೃತ ದೀಪಕ್ ಅವರ ನಿವಾಸದಿಂದ ರುದ್ರಭೂಮಿಯ ತನಕ ಶವಯಾತ್ರೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಮುಕ್ಕಾಲು ಕಿ.ಮೀ. ದೂರ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸರಕಾರದ ವತಿಯಿಂದ ಆರಂಭದಲ್ಲಿ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿತ್ತು. ಬಡ ಕುಟುಂಬದ ದೀಪಕ್‌ಗೆ 50 ಲಕ್ಷ ರೂ. ಪರಿಹಾರ ನೀಡಬೇಕೆಂಬ ಒತ್ತಾಯ ಕೇಳಿಬಂತು. ಜಿಲ್ಲಾಧಿಕಾರಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮತ್ತೆ 5 ಲಕ್ಷ ರೂ. ಘೋಷಿಸುವ ಮೂಲಕ ಒಟ್ಟು 10 ಲಕ್ಷ ರೂ. ಪರಿಹಾರ ಘೋಷಿಸಿದರು. ಪರಿಹಾರ ಸರಿಯಾದ ಸಮಯದಲ್ಲಿ ಸಿಗದಿದ್ದರೆ ನನ್ನನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಸೆಂಥಿಲ್ ಭರವಸೆ ನೀಡಿದರು.

ದೀಪಕ್ ನಿವಾಸದ ಮುಂದೆ ಅಪಾರ ಜನಸ್ತೋಮ ನೆರೆದಿದ್ದು, ಅಂತ್ಯಕ್ರಿಯೆ ನಡೆಸಲು ಸರ್ವ ಸಿದ್ದತೆ ನಡೆಸಲಾಗುತ್ತಿದೆ..

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News