ಬೆಂಗಳೂರು: ಕೆ.ಪಿ.ನಂಜುಂಡಿ ಒಡೆತನದ ಅಂಗಡಿಗಳ ಮೇಲೆ ಐಟಿ ಮೇಲೆ

Update: 2018-01-04 14:36 GMT

ಬೆಂಗಳೂರು, ಜ. 4: ಉದ್ಯಮಿ, ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ ಮಾಲಕತ್ವದ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿ ವಿವಿಧೆಡೆಗಳಲ್ಲಿ ಏಕಕಾಲಕ್ಕೆ ದಿಢೀರ್ ದಾಳಿ ನಡೆಸಿದ ಐಟಿ ಅಧಿಕಾರಿಗಳು ಚಿನ್ನಾಭರಣ, ಅವುಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಳಗ್ಗೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಕಂಡ ಅಂಗಡಿ ಸಿಬ್ಬಂದಿ ಕ್ಷಣ ಅವಾಕ್ಕಾಗಿದ್ದಾರೆ ಎನ್ನಲಾಗಿದೆ.

ಅಂಗಡಿ ಸಿಬ್ಬಂದಿಯನ್ನು ಪ್ರತ್ಯೇಕ ಸ್ಥಳದಲ್ಲಿ ಕೂರಿಸಿ ಅಧಿಕಾರಿಗಳು ಆಭರಣ, ನಗದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಆರಂಭವಾದ ದಾಳಿ ಸಂಜೆಯ ವರೆಗೆ ಮುಂದುವರಿದಿದ್ದು, ಇನ್ನೂ ಸ್ಪಷ್ಟ ಚಿತ್ರಣ ಸಿಕ್ಕಿಲ. ಆದಾಯ ತೆರಿಗೆಯನ್ನು ಸರಿಯಾಗಿ ಪಾವತಿಸದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News