ಕಾರ್ಕಳ: ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ

Update: 2018-01-04 16:59 GMT

ಕಾರ್ಕಳ, ಜ.4: ಬಂಗ್ಲೆಗುಡ್ಡೆ ಜಂಕ್ಷನ್‌ನಲ್ಲಿ ಯುವಕನೋರ್ವನಿಗೆ ಬಜರಂಗ ದಳದ ಮುಖಂಡನ ನೇತೃತ್ವದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿನ ಫುಲ್ಕೇರಿ ನಿವಾಸಿ ಮೊಹ್ಸಿನ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ರಾತ್ರಿ 7:30ರ ಸುಮಾರಿಗೆ ಬಜರಂಗ ದಳದ ಉಡುಪಿ ಜಿಲ್ಲಾ ಮುಖಂಡ ಮಹೇಶ್ ಶೆಣೈ ನೇತೃತ್ವದಲ್ಲಿ ಬಂದ ಆರೇಳು ಮಂದಿಯ ತಂಡ ಮೊಹ್ಸಿನ್ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News