ಲಾರಿ ಸ್ಕೂಟರ್ ಮುಖಾಮುಖಿ ಢಿಕ್ಕಿ : ಓರ್ವ ಮೃತ್ಯು

Update: 2018-01-07 15:35 GMT

ನಾಗಮಂಗಲ, ಜ.7: ಲಾರಿ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅಂಚೇಚಿಟ್ಟನಹಳ್ಳಿ ಸಮೀಪ ರವಿವಾರ ನಡೆದಿದೆ.

ತಾಲೂಕಿನ ಬೆಳ್ಳೂರು ಕ್ರಾಸ್‍ನಲ್ಲಿ ಸರ್ವಿಸ್ ಸ್ಟೇಷನ್‍ವೊಂದರಲ್ಲಿ ಕೆಲಸಕ್ಕಿದ್ದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಸಚಿನ್(24)  ಸಾವನ್ನಪ್ಪಿದ್ದು, ಗಾಯಗೊಂಡಿರುವ ಈತನ ಸ್ನೇಹಿತ ವಿಷ್ಣುವನ್ನು ಸಮೀಪದ ಆದಿಚುಂಚನಗಿರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಮಧ್ಯಾಹ್ನ ಶ್ರೀರಂಗಪಟ್ಟಣ ಬೀದರ್ ರಾಜ್ಯ ಹೆದ್ದಾರಿಯಲ್ಲಿ ನಾಗಮಂಗಲ ಕಡೆಗೆ ಸ್ಕೂಟರ್‍ನಲ್ಲಿ ಇಬ್ಬರೂ ಬರುತ್ತಿದ್ದಾಗ ಮೈಸೂರು ಕಡೆಯಿಂದ ಹೋಗುತ್ತಿದ್ದ ಲಾರಿಗೆ ಮುಖಾ ಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News