ಭದ್ರಾ ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಶರಣು

Update: 2018-01-08 13:23 GMT

ಶಿವಮೊಗ್ಗ, ಜ. 8: ಭದ್ರಾ ನಾಲೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ನೆಲ್ಲಿಸರ ಗ್ರಾಮದಲ್ಲಿ ನಡೆದಿದೆ.

ಅಂಬಿಕಾ (38) ಆತ್ಮಹತ್ಯೆಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ. ಶಾಂತಿನಗರದ ಮುರುಗೇಶ ಎಂಬುವರೊಂದಿಗೆ ಇವರ ವಿವಾಹವಾಗಿದ್ದು, ಕಳೆದ ಕೆಲ ವರ್ಷಗಳ ಹಿಂದೆ ಪತಿ ನಿಧನರಾಗಿದ್ದರು. ತಮ್ಮ 16 ವರ್ಷದ ಮಗನೊಂದಿಗೆ ತವರು ಮನೆಯಾದ ನೆಲ್ಲಿಸರ ಗ್ರಾಮದಲ್ಲಿ ನೆಲೆಸಿದ್ದರು.

ಪತಿ ಮನೆಯ ಆಸ್ತಿ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದ್ದು, ಪೊಲೀಸರ ತನಿಖೆಯ ನಂತರವಷ್ಟೆ ಸ್ಪಷ್ಟ ಕಾರಣ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News