×
Ad

ಉಡುಪಿ: ನದಿಗೆ ಬಿದ್ದು ಯುವಕ ಮೃತ್ಯು

Update: 2018-01-08 21:09 IST

ಉಡುಪಿ, ಜ.8: ಆಕಸ್ಮಿಕವಾಗಿ ಕಾಲು ಜಾರಿ ಸಂತೆಕಟ್ಟೆಯ ಸೇತುವೆಯ ಕೆಳಗೆ ಹರಿಯುತ್ತಿರುವ ನದಿಯ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಕೆಳಾರ್ಕಳ ಬೆಟ್ಟುವಿನ ಪ್ರವೀಣ್ (34) ಎಂದು ಗುರುತಿಸಲಾಗಿದೆ.

ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಇವರು, ಜ. 6ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದರ. ಜ. 8ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಅವರ ಮೃತದೇಹವು ಸಂತೆಕಟ್ಟೆಯ ಸೇತುವೆಯ ಕೆಳಗೆ ಹರಿಯುತ್ತಿರುವ ನದಿಯ ದಂಡೆಯಲ್ಲಿ ಪತ್ತೆಯಾಗಿದೆ. ಇವರು ಯಾವುದೋ ಕಾರಣಕ್ಕೆ ನದಿಯ ಬಳಿ ಹೋದವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News