ಹುಬ್ಬಳ್ಳಿ-ಧಾರವಾಡ ಬಂದ್

Update: 2018-01-08 18:24 GMT

ವಿಜಯಪುರ ದಲಿತ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ, ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಮಹಾರಾಷ್ಟ್ರದ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಗಳ ಕರೆ ನೀಡಿದ್ದ ಹುಬ್ಬಳ್ಳಿ/ಧಾರವಾಡ ಅವಳಿನಗರ ಹಾಗೂ ಬೆಳಗಾವಿಯ ಚಿಕ್ಕೋಡಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಕರೆ ಹಿನ್ನೆಲೆಯಲ್ಲಿ ಅವಳಿನಗರಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಕೆಎಸ್ಸಾರ್ಟಿಸಿ, ನಗರ ಸಾರಿಗೆ ಬಸ್ ಸೇರಿದಂತೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor