ಪಿಎಫ್ಐ ಮೆಲ್ಕಾರ್ ವತಿಯಿಂದ ರಕ್ತದಾನ ಶಿಬಿರ
Update: 2018-01-09 18:34 GMT
ಮೆಲ್ಕಾರ್, ಜ.9: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೆಲ್ಕಾರ್ ವಲಯದ ವತಿಯಿಂದ ‘ಜನಾರೋಗ್ಯವೇ ರಾಷ್ಟ್ರ ಶಕ್ತಿ’ ರಾಷ್ಟ್ರೀಯ ಅಭಿಯಾನದ ಪ್ರಯುಕ್ತ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಆಶ್ರಯದಲ್ಲಿ ಸಜೀಪನಡು ಎಸ್ಡಿಪಿಐ ಕಚೇರಿಯಲ್ಲಿ ರಕ್ತದಾನ ಶಿಬಿರ ನಡೆಯಿತು.
ಪಿಎಫ್ಐ ಸಜೀಪ ಏರಿಯಾದ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಜೀಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಿಎಫ್ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್, ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸೀರ್ ಮಾತನಾಡಿದರು.
ಎಸ್ಡಿಪಿಐ ಸಜೀಪನಡು ಗ್ರಾಮ ಸಮಿತಿಯ ಅಧ್ಯಕ್ಷ ಎಸ್.ಎನ್.ಅಬ್ದುಲ್ ರಹ್ಮಾನ್, ಬಂಟ್ವಾಳ ಐಇಸಿ ಅಧ್ಯಕ್ಷ ಮುಬಾರಕ್ ಗೂಡಿನಬಳಿ, ದೇರಳಕಟ್ಟೆ ಯೆನೆಪೋಯ ಮೆಡಿಕಲ್ ಕಾಲೇಜಿನ ವೈದ್ಯರಾದ ಡಾ. ಶರೀಫ್, ಡಾ. ಪ್ರಿಯಾಂಕ, ಡಾ. ಶುಹಾನ ಮೊದಲಾದವರು ಉಪಸ್ಥಿತರಿದ್ದರು.