ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಶಿಕ್ಷಣಕ್ಕೆ ಮಹತ್ವ ನೀಡಿ: ಇಕ್ಬಾಲ್ ಅನ್ಸಾರಿ

Update: 2018-01-11 11:30 GMT

ಗಂಗಾವತಿ,ಜ.11: ಸರ್ಕಾರ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯ ನೀಡಿದೆ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಶಿಕ್ಷಣಕ್ಕೆ ಮಹತ್ವ ನೀಡಬೇಕೆಂದು ಶಾಸಕ ಇಕ್ಬಾಲ್ ಅನ್ಸಾರಿ ಹೇಳಿದರು.

ಕೊಲ್ಲಿ ನಾಗೇಶ್ವರ ರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ತಮ್ಮ ನಿವಾಸದಲ್ಲಿ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿ, ಕಾಲೇಜಿನ 165 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಗುತ್ತಿದ್ದು, ಇದರಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಹೆಚ್ಚಿನ ಜ್ಞಾನ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದರು. 

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಸಿರಾಜ್ ಸಿದ್ದಾಪುರ, ಪ್ರಾಂಶುಪಾಲ ಹಸನ್‍ಮಿಯಾ, ನಗರಸಭೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಮನೋಹರಸ್ವಾಮಿ, ಬಸವರಾಜಸ್ವಾಮಿ ಮಳೇ ಮಠ, ನಗರಸಭಾ ಸದಸ್ಯ ಹುಸೇನಪ್ಪ ಹಂಚಿನಾಳ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News