ಅಂಗನವಾಡಿ-ಹಾಸ್ಟೆಲ್‌ಗಳಿಗೆ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಭೇಟಿ

Update: 2018-01-11 11:58 GMT

ಧಾರವಾಡ, ಜ.11: ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಇಲ್ಲಿನ ರಾಜೀವ್‌ನಗರದ ಅಂಗನವಾಡಿಗೆ ಭೇಟಿ ನೀಡಿ, ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೂರೈಸಲಾಗುತ್ತಿರುವ ಪೌಷ್ಠಿಕ ಆಹಾರದ ವಿವರ ಪಡೆದರು.

ಅಂಗನವಾಡಿ ಮಕ್ಕಳಿಂದ ಶಿಶು ಪ್ರಾಸಗಳನ್ನು ಹೇಳಿಸಿ ಅವರ ಅನಿಸಿಕೆಗಳನ್ನು ಆಲಿಸಿದರು. ನಂತರ ದೊಡ್ಡನಾಯಕನಕೊಪ್ಪದ ಬೇಂದ್ರೆ ನಗರದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಹಾಸ್ಟೆಲ್ ಕಟ್ಟಡ, ಆವರಣ, ಅಡುಗೆ ಮನೆ, ವಿದ್ಯಾರ್ಥಿಗಳ ಕೊಠಡಿ, ಗ್ರಂಥಾಲಯಗಳಿಗೆ ಭೇಟಿ ನೀಡಿ ನಿರ್ವಹಣೆ ಬಗೆಗೆ ವಿಶ್ವನಾಥ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಲೋಕಾಯುಕ್ತ ಎಡಿಜಿಪಿ ಸಂಜಯ್ ಸಹಾಯ್, ಜಿಲ್ಲಾ ಪಂಚಾಯತ್ ಸಿಇಓ ಆರ್.ಸ್ನೇಹಲ್, ಅಪರ ಜಿಲ್ಲಾಧಿಕಾರಿ ಇಬ್ರಾಹೀಂ ಮೈಗೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News