ಕರ್ನಾಟಕ ಬ್ಯಾಂಕಿನ ಮಹಾಬಲೇಶ್ವರ ಎಂ.ಎಸ್ ಅವರಿಗೆ ಪ್ರಶಸ್ತಿ
Update: 2018-01-11 21:00 IST
ಉಡುಪಿ, ಜ. 11: ಸಮಾಜ ಸೇವೆ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀ ರಾಜಾಂಗಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕರ್ನಾಟಕ ಬ್ಯಾಂಕಿನ ಅಧ್ಯಕ್ಷ ಪಿ. ಜಯರಾಮ ಭಟ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿರುವ ಮಹಾಬಲೇಶ್ವರ ಎಂ.ಎಸ್ ಅವರಿಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಈ ಸಂದರ್ಭ ಪರ್ಯಾಯ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಉಪಸ್ಥಿತರಿದ್ದರು.