ಕಾಲುಜಾರಿ ನೀರಿಗೆ ಬಿದ್ದು ಪೊಲೀಸ್ ಪೇದೆ ಮೃತ್ಯು

Update: 2018-01-11 17:27 GMT

ಗುಂಡ್ಲುಪೇಟೆ,ಜ.11: ತಾಲೂಕಿನ ಬೇಗೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಯೊಬ್ಬ ಕಾಲುಜಾರಿ ನೀರಿಗೆ ಬಿದ್ದು ಸಾವಿಗೀಡಾಗಿರುವ ದುರ್ಘಟನೆ ನಡೆದಿದೆ.

ತಾಲೂಕಿನ ಕಬ್ಬಹಳ್ಳಿ ಗ್ರಾಮದ ಚಂದ್ರಶೇಖರ್(30) ತನ್ನ ಕುಟುಂಬದೊಡನೆ ಮಳವಳ್ಳಿ ತಾಲೂಕಿನ ಮತ್ತಿತಾಳೇಶ್ವರ ದೇವಸ್ಥಾನಕ್ಕೆ ತೆರಳಿದ್ದಾಗ ಕಾಲುಜಾರಿ ಕೊಳಕ್ಕೆ ಬಿದ್ದು ಸಾವಿಗೀಡಾದರು. 2009 ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಚಂದ್ರಶೇಖರ್ ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇತ್ತೀಚೆಗೆ ಬೇಗೂರಿಗೆ ವರ್ಗಾವಣೆಯಾಗಿದ್ದರು. ಮೃತರಿಗೆ ಪತ್ನಿ ಪೂಜಾ ಹಾಗೂ ಒಂದು ಗಂಡು ಮಗುವಿದೆ. ಮೃತದೇಹವನ್ನು ಸ್ವಗ್ರಾಮಕ್ಕೆ ತಂದು ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News