ಬೈಕ್ ಸ್ಕಿಡ್: ಸವಾರ ಮೃತ್ಯು

Update: 2018-01-12 12:30 GMT

ಶಿವಮೊಗ್ಗ, ಜ.12: ನಿಯಂತ್ರಣ ಕಳೆದುಕೊಂಡು ಬೈಕ್‍ವೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ಭದ್ರಾ ಕಾಲೋನಿ ಸಮೀಪದ ಸಂತೋಷ ರೈಸ್‍ಮಿಲ್ ಸಮೀಪದ ಸಿ.ಎನ್.ರಸ್ತೆಯಲ್ಲಿ ನಡೆದಿದೆ. 

ಮಂಜುನಾಥ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ  ಗಾಯಗೊಂಡಿದ್ದ ಮಂಜುನಾಥ್‍ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News