ಕಳವು ಆರೋಪ: ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ

Update: 2018-01-12 17:43 GMT

ಬೆಂಗಳೂರು, ಜ.12: ಸ್ನೇಹಿತರೊಂದಿಗೆ ಸೇರಿ ಕಳವು ಮಾಡಿದ್ದ ಆರೋಪದ ಮೇಲೆ ನೇಪಾಳ ಮೂಲದ ಭದ್ರತಾ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿ 14 ಲಕ್ಷ ರೂ. ಮೌಲ್ಯದ 425 ಗ್ರಾಂ ತೂಕದ ಚಿನ್ನಾಭರಣ, 5 ಕೆಜಿ ಬೆಳ್ಳಿ ವಸ್ತುಗಳು, ದೇಶಿ ಕರೆನ್ಸಿ ನೋಟುಗಳು ಹಾಗೂ ಮೊಬೈಲ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನೇಪಾಳ ಮೂಲದ ಬೀಮ್ ಬಹದ್ದೂರ್ ತಾಪ (31), ಜಯರಾಜ್ ಬಹದ್ದೂರ್ ಪೂರಿ (25), ಧರ್ಮರಾಜ್ ಬಹದ್ದೂರ್ ಬಹೋರಾ (40) ಮತ್ತು ಗಣೇಶ್ ಬಹದ್ದೂರ್ ತಾಪ (34) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ಇವರ ಬಂಧನದಿಂದ ಬನಶಂಕರಿ, ಜೆಪಿ ನಗರ ಪೊಲೀಸ್ ಠಾಣೆಯ ಎರಡು ಪ್ರಕರಣ ಪತ್ತೆಯಾಗಿದ್ದು, ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News