ಉಡುಪಿ: ಸಾರ್ವಜನಿಕ ಶೌಚಾಲಯ ಉದ್ಘಾಟನೆ

Update: 2018-01-13 16:21 GMT

ಉಡುಪಿ, ಜ.13: ಉಡುಪಿ ನಗರಸಭೆ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ನಾರ್ತ್ ಶಾಲೆ ಬಳಿ ವಿಕಲಚೇತನರಿಗಾಗಿ 2013-14ನೇ ಸಾಲಿನ ಎಸ್‌ಎಫ್‌ಸಿ ಅನುದಾನದಲ್ಲಿ ಸುಮಾರು 4.3 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಶೌಚಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಸಭಾ ಸದಸ್ಯ ಶ್ಯಾಂಪ್ರಸಾದ್ ಕುಡ್ವ, ಗುತ್ತಿಗೆದಾರ ಪಿ.ಬಾಬು, ಯಜ್ಞೇಶ್ ಆಚಾರ್ಯ, ಆರೀಪ್ ಮಹಮ್ಮದ್, ಸಂತೋಷ್ ರಾವ್ ಉಪಸ್ಥಿತರಿದ್ದರು. ಪೌರಾಯುಕ್ತ ಡಿ.ಮಂಜುನಾಥಯ್ಯ ಸ್ವಾಗತಿಸಿ ನಗರಸಭಾ ಸದಸ್ಯ ಜನಾರ್ಧನ ಭಂಡಾರ್ಕರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News