ಸಿಎಂ ಗೆ ವಿವೇಚನೆಯ ಕೊರತೆ ಇದೆ: ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಕಿಡಿ

Update: 2018-01-13 16:31 GMT

ಮೈಸೂರು,ಜ.13: ಬಿಜೆಪಿ, ಆರ್ ಎಸ್ ಎಸ್  ಉಗ್ರಗಾಮಿಗಳು ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ  ಮಾಜಿ ಸಚಿವ ವಿ.ಶ್ರೀನಿವಾಸ್‍ಪ್ರಸಾದ್ ಕಿಡಿಕಾರಿದರು.

ಮೈಸೂರಿನಲ್ಲಿ ಶನಿವಾರ ಮಾಧ್ಯಮದಗಳೊಂದಿಗೆ ಮಾತನಾಡಿದ ಅವರು, ಒಬ್ಬ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿ ಈ ರೀತಿಯ ಹೇಳಿಕೆ ನೀಡಬಾರದು. ಇದರ ಅರಿವು ಕೂಡ ಅವರಿಗೆ ಇಲ್ಲ. ಆ ಆಮನುಷ್ಯನಿಗೆ ವಿವೇಚನೆಯ ಕೊರತೆ ಇದೆ ಹಾಗಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಉನ್ನತ ಹುದ್ದೆಯಲ್ಲಿರುವವರು ಈ ರೀತಿ ಹೇಳಿಕೆ ನೀಡಬಾರದು. ಸಿಎಂ ಆಗಿ ಈ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡೋದು ತಪ್ಪು. ಸಿಎಂ ಮಾತಿನಲ್ಲೇ ಅಹಂ ಇದೆ ಎಂದು ಹರಿಹಾಯ್ದರು.

ಉಪಚುನಾವಣೆಯಲ್ಲಿ ನನ್ನ ವಿರುದ್ದ ಚಕ್ರವ್ಯೂಹ ರಚಿಸಿ ಸೋಲಿಸಿದ್ದಾರೆ. ಮುಂಬರುವ ಚುನಾವಣೆಲ್ಲಿ ಇವರ ಬಣ್ಣ ಬಯಲು ಮಾಡುತ್ತೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News