ಗೋಡೆಗೆ ಕಾರು ಢಿಕ್ಕಿ: ಯುವಕ ಮೃತ್ಯು

Update: 2018-01-14 13:10 GMT

ಬೆಂಗಳೂರು, ಜ. 4: ವೇಗವಾಗಿ ಹೋಗುತ್ತಿದ್ದ ಕಾರು ಮನೆಯೊಂದರ ಗೋಡೆಗೆ ಢಿಕ್ಕಿ ಹೊಡೆದು ಕಾಂಗೊ ದೇಶದ ಓರ್ವ ಮೃತಪಟ್ಟರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಣ್ಣೂರು ಮುಖ್ಯ ರಸ್ತೆಯಲ್ಲಿ  ರವಿವಾರ ನಡೆದಿದೆ.

ಕಾಂಗೊದ ಅಸ್ಸಾಮಿ ಬಾಲಿವೆಬ್(24) ಮೃತಪಟ್ಟಿದ್ದು, ಘಟನೆಯಲ್ಲಿ ಬ್ರುನೊ(32) ಹಾಗೂಪಿಯೊಟ್ರೊಪಿ(27) ಎಂಬುವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮದ್ಯದ ಅಮಲಿನಲ್ಲಿ ರವಿವಾರ ಮುಂಜಾನೆ 4 ಗಂಟೆ ಸುಮಾರಿಗೆ ಕೊತ್ತನೂರು ಕಡೆಗೆ ಕಾರನ್ನುಅಸ್ಸಾಮಿಬಾಲಿ ವೇಗವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದು, ಗೆದ್ದಲ ಹಳ್ಳಿಯ ಬಳಿ ಮನೆಯೊಂದರ ಗೋಡೆಗೆ ಢಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂವರನ್ನುಪೀಪಲ್ಟ್ರೀ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಮಾರ್ಗಮದ್ಯೆ ಅಸ್ಸಾಮಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಬಾಣಸವಾಡಿ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News