ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
Update: 2018-01-15 17:40 IST
ಮಂಗಳೂರು, ಜ.15: ಸುರತ್ಕಲ್ನ ಗೋವಿಂದದಾಸ ಕಾಲೇಜಿನಲ್ಲಿ ಜ.23ರಂದು ಪ್ರೊ. ಎಚ್. ರಮೇಶ ಕೆದಿಲಾಯರ ಸಮ್ಮೇಳನಾಧ್ಯಕ್ಷತೆಯಲ್ಲಿ ಜರಗಲಿರುವ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಮಂತ್ರಣ ಪತ್ರಿಕೆಯನ್ನು ರಂಗ ಕರ್ಮಿ ಸದಾನಂದ ಸುವರ್ಣ ಬಿಡುಗಡೆಗೊಳಿಸಿದರು.
ಈ ಸಂದರ್ಭ ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಜಯಲಕ್ಷ್ಮೀ ಬಿ. ಶೆಟ್ಟಿ, ಪದಾಧಿಕಾರಿಗಳಾದ ಪ್ರೊ. ಪಿ. ಕೃಷ್ಣಮೂರ್ತಿ, ಅರುಣಾ ಕುಮಾರಿ, ನಾಗರಾಜ, ಜಯಲಕ್ಷ್ಮೀ ಭಟ್ ಉಳುವಾನ, ದಯಾಮಣಿ ಕೋಟ್ಯಾನ್, ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.