×
Ad

ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2018-01-15 17:40 IST

ಮಂಗಳೂರು, ಜ.15: ಸುರತ್ಕಲ್‌ನ ಗೋವಿಂದದಾಸ ಕಾಲೇಜಿನಲ್ಲಿ ಜ.23ರಂದು ಪ್ರೊ. ಎಚ್. ರಮೇಶ ಕೆದಿಲಾಯರ ಸಮ್ಮೇಳನಾಧ್ಯಕ್ಷತೆಯಲ್ಲಿ ಜರಗಲಿರುವ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಮಂತ್ರಣ ಪತ್ರಿಕೆಯನ್ನು ರಂಗ ಕರ್ಮಿ ಸದಾನಂದ ಸುವರ್ಣ ಬಿಡುಗಡೆಗೊಳಿಸಿದರು.
ಈ ಸಂದರ್ಭ ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಜಯಲಕ್ಷ್ಮೀ ಬಿ. ಶೆಟ್ಟಿ, ಪದಾಧಿಕಾರಿಗಳಾದ ಪ್ರೊ. ಪಿ. ಕೃಷ್ಣಮೂರ್ತಿ, ಅರುಣಾ ಕುಮಾರಿ, ನಾಗರಾಜ, ಜಯಲಕ್ಷ್ಮೀ ಭಟ್ ಉಳುವಾನ, ದಯಾಮಣಿ ಕೋಟ್ಯಾನ್, ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News