ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ

Update: 2018-01-15 12:56 GMT

ಹೊಸದಿಲ್ಲಿ, ಜ.15: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಉತ್ತರ ಪ್ರದೇಶ ಪ್ರವಾಸದಲ್ಲಿದ್ದು, ಇಲ್ಲಿನ ಸಲೋನ್ ನಲ್ಲಿ ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಸಲೋನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದರು. ಆದರೆ ಈ ಘಟನೆಗೆ ಬಿಜೆಪಯು ಕಾಂಗ್ರೆಸನ್ನು ದೂಷಿಸಿದೆ. “ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಮೇಲೆ ದಾಳಿ ನಡೆಸಿದರು” ಎಂದು ಬಿಜೆಪಿ ಶಾಸಕ ಬಹದ್ದೂರ್ ಕೋರಿ ಹೇಳಿದರು.

ರಾಹುಲ್ ಗಾಂಧಿಯವರ ಜೊತೆ ತಮ್ಮ ಅಹವಾಲುಗಳನ್ನು ಹೇಳಲು ಬಂದವರೊಡನೆ ಕಾಂಗ್ರೆಸ್ ಕಾರ್ಯಕರ್ತರು ಅನುಚಿತವಾಗಿ ವರ್ತಿಸಿದರು. ಪೊಲೀಸರೂ ಕೂಡ ಅವರಿಗೆ ಸಹಕರಿಸಿದರು ಎಂದು ಕೋರಿ ಆರೋಪಿಸಿದ್ದಾರೆ.

ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ರಾಹುಲ್ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆಯನ್ನೂ ನಡೆಸಿದರು. ಕಾಂಗ್ರೆಸ್ ಅಧ್ಯಕ್ಷನಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ರಾಹುಲ್ ಅಮೇಠಿಗೆ ಭೇಟಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News