ಪಿಎಸ್ಸೈ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆರೋಪ

Update: 2018-01-16 15:28 GMT

ಬೆಂಗಳೂರು, ಜ.16: ಪಿಎಸ್ಸೈ ಒಬ್ಬರ ಮೇಲೆ ಹಲ್ಲೆ ನಡೆಸಿರುವ ಆರೋಪ ಇಲ್ಲಿನ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ಪಿಎಸ್ಸೈ ನವೀನ್‌ಕುಮಾರ್ ಎಂಬುವರು ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಸೋಮವಾರ ತಡರಾತ್ರಿ ಗಸ್ತಿನಲ್ಲಿದ್ದ ವೇಳೆ ನಗರದ ಬ್ರೂಕ್ ಫೀಲ್ಡ್ ಮಾಲ್ ಸಮೀಪ ಪಿಎಸ್ಸೈ ನವೀನ್‌ಕುಮಾರ್ ಹಾಗೂ ಪೇದೆ ಶಂಕರ್ ಎಂಬುವರ ಮೇಲೆ ಮದ್ಯದ ಅಮಲಿನಲ್ಲಿದ್ದ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಚ್‌ಎಎಲ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News