ಎಂ.ಕೆ.ಗಣಪತಿ ನಿಗೂಢ ಸಾವು ಪ್ರಕರಣ: ತನಿಖೆ ಅವಧಿ ವಿಸ್ತರಣೆ

Update: 2018-01-16 18:10 GMT

ಬೆಂಗಳೂರು, ಜ.16: ಡಿವೈಎಸ್ಪಿ ಎಂ.ಕೆ.ಗಣಪತಿ ನಿಗೂಢ ಸಾವು ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಕೇಶವ ನಾರಾಯಣ ನೇತೃತ್ವದ ಆಯೋಗದ ಅವಧಿಯನ್ನು ರಾಜ್ಯ ಸರಕಾರ ವಿಸ್ತರಣೆ ಮಾಡಿದೆ.

ಆಯೋಗದ ಅವಧಿಯನ್ನು ಫೆ.26ರವರೆಗೆ ವಿಸ್ತರಿಸಿ ಗೃಹ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಡಿವೈಎಸ್ಪಿಗಣಪತಿ ಸಾವಿನ ಪ್ರಕರಣದ ತನಿಖೆ ನಡೆಸಲು ನಿವೃತ್ತ ನ್ಯಾ. ಕೆ.ಎನ್.ಕೇಶವ ನಾರಾಯಣ ನೇತೃತ್ವದಲ್ಲಿ ತನಿಖಾ ಆಯೋಗವನ್ನು 2016ರ ಜುಲೈ 16 ರಂದು ರಚಿಸಲಾಗಿತ್ತು. ಅದರ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ತನಿಖಾ ಅವಧಿ ವಿಸ್ತರಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News