ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿ

Update: 2018-01-16 18:32 GMT

ಮಾನ್ಯರೇ,

ಕೇರಳ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಪಂಪ್‌ವೆಲ್-ತಲಪಾಡಿ ವ್ಯಾಪ್ತಿಯಲ್ಲಿ ಕೆಲವು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಈ ಹೆದ್ದಾರಿಯಲ್ಲಿ ವಾಹನ ನಿಬಿಡತೆ ಹೆಚ್ಚಾಗಿ ದಿನನಿತ್ಯ ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ.

ತಲಪಾಡಿ ಕಡೆಯಿಂದ ಮಂಗಳೂರಿಗೆ, ಹಾಗೆಯೇ ಮಂಗಳೂರಿನಿಂದ ಕೊಣಾಜೆ, ದೇರಳಕಟ್ಟೆಗೆ ವಿದ್ಯಾಭ್ಯಾಸಕ್ಕಾಗಿ ಮತ್ತು ಉದ್ಯೋಗಕ್ಕಾಗಿ ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಾರೆ. ಆದರೆ ಈ ನಿಧಾನಗತಿಯ ಕಾಮಗಾರಿಯಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆ ವಿಪರೀತವಾಗುತ್ತಿದೆ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ, ಉದ್ಯೋಗದ ಸ್ಥಳಗಳಿಗೆ ಕ್ಲಪ್ತ ಸಮಯಕ್ಕೆ ತಲುಪಲು ಸಾಧ್ಯವಾಗದೆ ಜನರು ತೊಂದರೆ ಅನುಭವಿಸುವಂತಾಗಿದೆ.
ಆದ್ದರಿಂದ ಸಂಬಂಧಿತರು ರಸ್ತೆ ಕಾಮಗಾರಿಯನ್ನು ಚುರುಕುಗೊಳಿಸಿ, ಆದಷ್ಟು ಬೇಗ ಪೂರ್ಣಗೊಳಿಸಿದರೆ ಹಲವಾರು ರಸ್ತೆ ಸಂಬಂಧಿತ ಸಮಸ್ಯೆಗಳು ಪರಿಹಾರವಾದೀತು.

Writer - ಸುನೀಲ್, ಮಂಜೇಶ್ವರ

contributor

Editor - ಸುನೀಲ್, ಮಂಜೇಶ್ವರ

contributor

Similar News