ರಾಜ್ಯ ಸರಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು : ಶಿವರಾಮ ಹೆಬ್ಬಾರ

Update: 2018-01-16 18:32 GMT

ಮುಂಡಗೋಡ,ಜ.16 : ರಾಜ್ಯ ಸರಕಾರವು ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ರೈತರು ಈ ಯೋಜನೆಗಳನ್ನು ಸದುಪಯೋಗಪಡಿಸಿಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಅವರು ಮಂಗಳವಾರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಕೃಷಿ ಭಾಗ್ಯ ಫಲಾನುಭವಿ ಕೃಷಿಹೊಂಡ ನಿರ್ಮಾಣ ಮಾಡಿಕೊಂಡ 21 ರೈತರಿಗೆ ಚೆಕ್ ವಿತರಣೆ ಮಾಡಿ ಮಾತನಾಡುತ್ತಿದ್ದರು

ರೈತರ ಜಮೀನುಗಳು ಹಸನಾಗಿರಲೇಂದು ಕೃಷಿಹೊಂಡ ನಿರ್ಮಾಣಮಾಡಿಕೊಳ್ಳಲು ಸೇರಿದಂತೆ ಜಮೀನುಗಳಿಗೆ ನೀರುಹಾಯಿಸಲು ಪೈಪುಗಳನ್ನು ನೀಡುತ್ತಿದೆ.  ರೈತರ 50 ಸಾವಿರ ರೂ ಸಾಲಮನ್ನಾ ಮಾಡಿ ಸರಕಾರವು ರೈತರಪರವಾಗಿದೆ ಎಂದು ತೋರಿಸಿಕೊಟ್ಟಿದೆ. ರೈತರ ಅಭಿವೃದ್ದಿ ಸಲುವಾಗಿ ಹಲವಾರು ಯೋಜನೆಗಳನ್ನು ಸರಕಾರವು ಹಾಕಿಕೊಂಡಿದೆ ರೈತರು ಸರಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ರವಿಗೌಡಾ ಪಾಟೀಲ, ತಾ.ಪಂ ಸದಸ್ಯ ಜ್ಞಾನದೇವ ಗುಡಿಯಾಳ, ಹಾಗೂ ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಕುಲಕರ್ಣಿ ಸೇರಿದಂತೆ ಕೃಷಿ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News