ಮನೆಗೆ ನುಗ್ಗಿ 2.50 ಲಕ್ಷ ನಗದು ಹಾಗೂ ಚಿನ್ನಾಭರಣ ಕಳವು

Update: 2018-01-17 16:37 GMT

ಬೆಂಗಳೂರು, ಜ.17: ಹಾಡುಹಗಲೇ ಮನೆಯೊಂದರ ಕಿಟಕಿ ಗ್ರಿಲ್ ಮುರಿದು ಒಳನುಗ್ಗಿದ ದುಷ್ಕರ್ಮಿಗಳು 2.50 ಲಕ್ಷ ನಗದು ಹಾಗೂ ಚಿನ್ನಾಭರಣ ಕಳವು ಮಾಡಿರುವ ಘಟನೆ ಇಲ್ಲಿನ ಹೆಣ್ಣೂರು ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.

ವಡ್ಡರಪಾಳ್ಯದ ಅಗರ ರಸ್ತೆ, ಮೊದಲನೇ ಮುಖ್ಯರಸ್ತೆಯ ಎಂಪಿ ಜಾನ್ ಎಂಬುವರು ವಾಸವಿದ್ದು, ಮಂಗಳವಾರ ಬೆಳಗ್ಗೆ 7 ಗಂಟೆಗೆ ಹೊರಗೆ ಹೋಗಿದ್ದರು. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಇವರ ಮನೆಯ ಬಾಲ್ಕನಿ ಹತ್ತಿ ಕಿಟಕಿ ಗ್ರಿಲ್ ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಜಾನ್ ಅವರು ಬೆಳಗ್ಗೆ 10:45ರ ಹೊತ್ತಿಗೆ ಮನೆಗೆ ವಾಪಸ್ಸಾಗಿದ್ದು, ತದನಂತರವೇ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಹೆಣ್ಣೂರು ಠಾಣೆಗೆ ದೂರು ನೀಡಿದ್ದು, ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News