ಪಿ.ಸಂಜೀವ

Update: 2018-01-17 17:22 GMT

ಬಂಟ್ವಾಳ,  ಜ.17: ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ)ದ ಹಿರಿಯ ಮುಖಂಡ ಪಿ.ಸಂಜೀವ (66) ಅವರು ಅಸೌಖ್ಯದಿಂದ ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಮಾಜಿ ಸದಸ್ಯ, ಸಿಪಿಐ ದ.ಕ ಮತ್ತು ಉಡುಪಿ ಜಿಲ್ಲಾ ಸಮಿತಿ ಮಾಜಿ ಕಾರ್ಯದರ್ಶಿ, ಪ್ರಸ್ತುತ ಬೀಡಿ ವರ್ಕರ್ಸ್‌ ಫೆಡರೇಶನ್(ಎಐಟಿಯುಸಿ)ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನರಿಕೊಂಬು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಅವರು, ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಸಂತಾಪ: ಇವರ ನಿಧನಕ್ಕೆ ಪಕ್ಷದ ರಾಜ್ಯ ಮಂಡಳಿ ಕಾರ್ಯದರ್ಶಿ ಪಿ.ವಿಲೋಕೇಶ್, ರಾಷ್ಟ್ರೀಯ ಮಂಡಳಿ ಸದಸ್ಯ ಡಾ. ಸಿದ್ದನಗೌಡ ಪಾಟೀಲ್, ಚಿಂತಕ ಡಾ. ಬಿ.ಶ್ರೀನಿವಾಸ ಕಕ್ಕಿಲ್ಲಾಯ, ಎಐಟಿಯುಸಿ ರಾಜ್ಯ ಅಧ್ಯಕ್ಷ ಅನಂತ ಸುಬ್ಬರಾವ್, ಪಕ್ಷದ ಹಿರಿಯ ಧುರೀಣ ಬಿ.ವಿಶ್ವನಾಥ ನಾಯಕ್, ಸಿಪಿಐ ಕಾಸರಗೋಡು ಜಿಲ್ಲಾ ಸಹ ಕಾರ್ಯದರ್ಶಿ ಬಿ.ವಿ.ರಾಜನ್ ಸಂತಾಪ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ