ಮರಕ್ಕೆ ಕಾರು ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು
Update: 2018-01-17 17:25 GMT
ಮಂಡ್ಯ, ಜ.17: ಮಳವಳ್ಳಿ ತಾಲೂಕಿನ ಬೂಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಬುಧವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ನಾಗರಬಾವಿ ನಿವಾಸಿ ತ್ರಿವೇಣಿ(21) ಸಾವನ್ನಪ್ಪಿದ್ದು, ಸನ್ಮತಿ, ಅಭಿಲಾಷ್, ಅಶ್ವತ್ಕುಮಾರ್ ಗಾಯಗೊಂಡಿದ್ದಾರೆ. ಚಾಲಕ ಭರತ್ಗೆ ಯಾವುದೇ ತೊಂದರೆಯಾಗಿಲ್ಲ. ಬೆಂಗಳೂರಿನ ಇಡಬ್ಲೂಐಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.