ತೆಂಗಿನ ಮರದಿಂದ ಬಿದ್ದು ಮೃತ್ಯು

Update: 2018-01-18 17:12 GMT

ಮಣಿಪಾಲ, ಜ.18: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜ.17ರಂದು ಸಂಜೆ 4:30ರ ಸುಮಾರಿಗೆ ಅಲೆವೂರು ಗ್ರಾಮದ ಗುರ್ನೆಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಗುರ್ನೆಬೆಟ್ಟು ನಿವಾಸಿ ಶ್ರೀನಿವಾಸ ನಾಯ್ಕ(46) ಎಂದು ಗುರು ತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡುತ್ತಿದ್ದ ಇವರು ಮನೆ ಸಮೀಪದ ದಿನೇಶ್ ಎಂಬವರ ಮನೆಯ ತೆಂಗಿನ ಮರಕ್ಕೆ ಹತ್ತಿ ತೆಂಗಿನ ಕಾಯಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ  ಬಿದ್ದು ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News