ಪಾಕ್ ನ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಬಲಿ

Update: 2018-01-19 05:25 GMT

ಶ್ರೀನಗರ, ಜ.19:ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರ ಸೆಕ್ಟರ್ ನಲ್ಲಿ  ಪಾಕಿಸ್ತಾನದ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ  ಭಾರತದ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ.

ಇಂದು ಬೆಳಗ್ಗೆ ಪಾಕಿಸ್ತಾನ ಸೇನೆಯು ಶೆಲ್ ದಾಳಿ ನಡೆಸಿದಾಗ ಆರ್ ಎಸ್ ಸೆಕ್ಟರ್ ನ ಇಬ್ಬರು ನಾಗರಿಕರು ಮೃತಪಟ್ಟರು. ಮೂವರು ಗಾಯಗೊಂಡರೆಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.  ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News