ಕಣ್ಣೂರು: ಆರೆಸ್ಸೆಸ್ ಕಾರ್ಯಕರ್ತನ ಬರ್ಬರ ಹತ್ಯೆ
Update: 2018-01-19 15:26 GMT
ತಿರುವನಂತಪುರಂ, ಜ.19: ಆರೆಸ್ಸೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಹತ್ಯೆಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಮೃತಪಟ್ಟವರನ್ನು ಶ್ಯಾಮ್ ಪ್ರಸಾದ್ ಎಂದು ಗುರುತಿಸಲಾಗಿದೆ. ಕಪ್ಪು ಬಣ್ಣದ ಕಾರಿನಲ್ಲಿ ಆಗಮಿಸಿದ ಮುಖವಾಡ ಧರಿಸಿದ್ದ ದುಷ್ಕರ್ಮಿಗಳ ತಂಡವೊಂದು ಶ್ಯಾಮ್ ಪ್ರಸಾದ್ ರನ್ನು ಬರ್ಬರವಾಗಿ ಹತ್ಯೆಗೈದಿದೆ.
ಜೀವ ಉಳಿಸಿಕೊಳ್ಳಲು ಶ್ಯಾಮ್ ಪ್ರಸಾದ್ ಸಮೀಪದ ಮನೆಯೊಂದಕ್ಕೆ ನುಗ್ಗಿದ್ದರು. ಆದರೆ ಅವರನ್ನು ಹೊರಗೆಳೆದ ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶ್ಯಾಮ್ ಪ್ರಸಾದ್ ರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ.