ದೇವಾಲಯದಲ್ಲಿ ಕಳವು

Update: 2018-01-19 16:52 GMT

ಬೆಂಗಳೂರು, ಜ.19: ಪ್ರಸಿದ್ಧ ಮಹಾಬಲೇಶ್ವರ ದೇವಾಲಯದ ಬೀಗ ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ವಿಗ್ರಹದ ಮೇಲಿದ್ದ ಮೂರು ಬೆಳ್ಳಿ ಕಿರೀಟಗಳು ಹಾಗೂ ಹುಂಡಿಯನ್ನು ಕಳವು ಮಾಡಿರುವ ಘಟನೆ ಇಲ್ಲಿನ ಕೆಆರ್‌ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ವೆಂಗಯ್ಯನ ಕೆರೆ ಬಳಿ ಇರುವ ಈ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಎಂದಿನಂತೆ ಪೂಜೆ ಸಲ್ಲಿಸಿ ಅರ್ಚಕರು ಬೀಗ ಹಾಕಿಕೊಂಡು ಮನೆಗೆ ತೆರಳಿದ್ದಾರೆ. ತಡರಾತ್ರಿ ದುಷ್ಕರ್ಮಿಗಳು ದೇವಸ್ಥಾನದ ಬೀಗ ಒಡೆದು ಒಳನುಗ್ಗಿ ಮೂರು ಬೆಳ್ಳಿ ಕಿರೀಟಗಳು ಹಾಗೂ ಅಪಾರ ಹಣವಿದ್ದ ಹುಂಡಿಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಮುಂಜಾನೆ ಅರ್ಚಕರು ದೇವಾಲಯಕ್ಕೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News