ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 10 ಮಂದಿ ಮೃತ್ಯು

Update: 2018-01-20 15:42 GMT

ಹೊಸದಿಲ್ಲಿ, ಜ.20: ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ಮಂದಿ ಮೃತಪಟ್ಟ ಘಟನೆ ದಿಲ್ಲಿಯ ಬವಾನ ಕೈಗಾರಿಕಾ ವಲಯದಲ್ಲಿ ಸಂಭವಿಸಿದೆ.

ಅಗ್ನಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಈ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹೊರಬರುವ ದಾರಿಯಿಲ್ಲದೆ ಸಂತ್ರಸ್ತರು ಫ್ಯಾಕ್ಟರಿಯೊಳಗಡೆ ಸಿಲುಕಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಖಾನೆಯಲ್ಲಿ ಹಲವರು ಅಕ್ರಮ ನಿರ್ಮಾಣ ಕಾರ್ಯಗಳನ್ನು ಮಾಡಲಾಗಿತ್ತು. ಇದರಿಂದಾಗಿ ಸಂತ್ರಸ್ತರಿಗೆ ಹೊರಬರಲು ಸಾಧ್ಯವಾಗಿಲ್ಲ. ಕೆಲವರು ಕಿಟಕಿಯಿಂದ ಹಾರಲು ಪ್ರಯತ್ನಿಸಿದರಾದರೂ ಬೆಂಕಿಯ ಕೆನ್ನಾಲಿಗೆ ಅವರನ್ನು ಬಲಿ ತೆಗೆದುಕೊಂಡಿತು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News