ಶಿವಮೊಗ್ಗ : ಹಲ್ಲೆ ನಡೆಸಿ ನಗದು, ಮೊಬೈಲ್ ದರೋಡೆ

Update: 2018-01-21 13:45 GMT

ಶಿವಮೊಗ್ಗ, ಜ. 21: ಮನೆಗೆ ಹೋಗಲು ವಾಹನಕ್ಕೆ ಕಾಯುತ್ತಾ ನಿಂತಿದ್ದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ ಅವರ ಬಳಿಯಿದ್ದ ನಗದು, ಮೊಬೈಲ್ ದರೋಡೆ ಮಾಡಿರುವ ಘಟನೆ ನಗರದ ಶಿವಪ್ಪನಾಯಕ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದೆ. 

ಮಲವಗೊಪ್ಪದ ನಿವಾಸಿ ಮಂಜುನಾಥ್ ಹಲ್ಲೆಗೊಳಗಾದವರೆಂದು ಗುರುತಿಸಲಾಗಿದೆ. ಇವರು ಮನೆಗೆ ಹೋಗಲು ವಾಹನವೊಂದಕ್ಕೆ ಕಾಯುತ್ತಾ ನಿಂತಿದ್ದಾಗ ಬೈಕ್‍ಗಳಲ್ಲಿ ಆಗಮಿಸಿದ ಆರು ಜನರಿದ್ದ ದರೋಡೆಕೋರರು ಹಲ್ಲೆ ನಡೆಸಿ ಅವರ ಬಳಿಯಿದ್ದ 2000 ನಗದು, ಮೊಬೈಲ್ ಅಪಹರಿಸಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News