ಕಾರು ಢಿಕ್ಕಿ : ಬೈಕ್ ಸವಾರ ಮೃತ್ಯು

Update: 2018-01-21 16:34 GMT

ಮಂಡ್ಯ, ಜ.21: ಕಾರು ಢಿಕ್ಕಿಯೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ವಿ.ಸಿ.ಫಾರಂ ಗೇಟ್ ಬಳಿ ರವಿವಾರ ಬೆಳಗ್ಗೆ ಜರುಗಿದೆ.

ತಾಲೂಕಿನ ಕೋಣನಹಳ್ಳಿ ಗ್ರಾಮದ ಕೃಷ್ಣ(48) ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಗ್ರಾಮದಿಂದ ಮಂಡ್ಯ ಕಡೆಗೆ ಬರುತ್ತಿದ್ದಾಗ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಕಾರಿನ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮಾಂತರ ಠಾಣೆ ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News